ಗುಡಿಬಂಡೆ ಮಾ.10 ರಂದು ಆರೋಗ್ಯ ಇಲಾಖೆ ಮತ್ತು ನೌಕರ ಸಂಘದಿಂದ ಕೆಲವು ಬೇಡಿಕೆಗಳನ್ನು ಈಡೇರಿಸುವಂತೆ ಮಾರ್ಚ್ 11ರಂದು ಓ ಪಿ ಡಿ ಬಂದು ಮೂಲಕ ಆರೋಗ್ಯ ಸಿಬ್ಬಂದಿಯಿಂದ ಮುಷ್ಕರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯರು ಹಾಗೂ ನೌಕರರು ಮಾರ್ಚ್ 11 ರಿಂದ 15 ರ ವರೆಗೆ ಮುಷ್ಕರ ನಡೆಸುವುದಾಗಿ ತಾಶಿಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು
ಇದೇ ಸಂದರ್ಭದಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಡಾ. ಅಕ್ಷಯ್ ಮಾತನಾಡಿ ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಇದರಿಂದ ನಮ್ಮ ಕರ್ನಾಟಕ ಸರ್ಕಾರಿ ವೈದ್ಯಕೀಯ ಅಧಿಕಾರಿಗಳ ಸಂಘದ ವತಿಯಿಂದ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಲಾಗಿದ್ದು ಇಲಾಖೆಯ ಯಾವುದೇ ಅಧಿಕಾರಿ ನೌಕರರ ಸಿಬ್ಬಂದಿಗಳಿಗೆ 5 ವರ್ಷಗಳಿಂದ ಮುಂಬಡ್ತಿ ನೀಡಿಲ್ಲ ನೀಮಾನುಸಾರ ಸೇವಾ ನಿರತ ಸರ್ಕಾರಿ ವೈದ್ಯರು ಅಧಿಕಾರಿ ನೌಕರರು ಉನ್ನತ ವ್ಯಾಸಂಗಕ್ಕೆ ಅವಕಾಶವಿದ್ದರೂ ಶಿಕ್ಷಣಕ್ಕೆ ಅವಕಾಶ ನೀಡುತ್ತಿಲ್ಲ ಆರೋಗ್ಯ ಇಲಾಖೆ ವರ್ಗಾವಣೆ ಕಾಯ್ದೆಯಲ್ಲಿರುವ ನೂನ್ಯತೆಯನ್ನು ಸರಿಪಡಿಸದೆ
ಅವೈಜ್ಞಾನಿಕವಾಗಿ ಕೌನ್ಸಲಿಂಗ್ ವರ್ಗಾವಣೆ ಮಾಡಲಾಗುತ್ತಿದೆ ಆದ್ದರಿಂದ ಮಾರ್ಚ್ 11 ರಿಂದ 15 ರ ತನಕ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ಆರಂಭಿಸಲಿದ್ದಾರೆ ಮಾರ್ಚ್ 11 ರಿಂದ ಹೊರರೋಗಿಗಳ ಚಿಕಿತ್ಸೆ ಸ್ಥಗಿತ ಗೊಳಿಸಲಾಗುವುದು ಕೇವಲ ತುರ್ತು ಸೇವೆಗಳನ್ನು ಮಾತ್ರ ನಿರ್ವಹಿಸಲಾಗುವುದು ಒಂದು ವೇಳೆ ನಮ್ಮ ಬೇಡಿಕೆಗಳು ಈಡೇರಿಸಿದ ಪಕ್ಷದಲ್ಲಿ ರಾಜ್ಯ ಸಂಘದ ನಿರ್ದೇಶನದ ಮೇರೆಗೆ ಅಂತ ಹಂತವಾಗಿ ಪ್ರತಿಭಟನೆಗೆ ಮುಂದಾಗುವುದಾಗಿ ತಿಳಿಸಿದರು.






