ಗುಡಿಬಂಡೆ ಮೇ 1 ರಂದು ಗುಡಿಬಂಡೆ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದರ್ಶನದಂತೆ ತಾಲೂಕು ಆಡಳಿತ ತಾಲೂಕು ಪಂಚಾಯಿತಿ ಪಟ್ಟಣ ಪಂಚಾಯಿತಿ ಪೊಲೀಸ್ ಇಲಾಖೆ ಕಾರ್ಮಿಕ ಇಲಾಖೆ ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘಗಳ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು
ಈ ಕಾರ್ಯಕ್ರಮವನ್ನು ಮಾನ್ಯ ಗೌರವಾನ್ವಿತ ಸಿವಿಲ್ ಮತ್ತು ಜೆ ಎಂ ಎಫ್ ಸಿ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಶ್ರೀ ಗಣೇಶ್ ಎನ್ ರವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಮತ್ತು ಕಾರ್ಮಿಕ ದಿನಾಚರಣೆಯ ಬಗ್ಗೆ ಮಾಹಿತಿ ನೀಡಿದರು
ಈ ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷರಾದ ಅಶ್ವತ್ ರೆಡ್ಡಿ ಅಧ್ಯಕ್ಷತೆ ವಹಿಸಿದ್ದರು ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಮಿಕ ನಿರೀಕ್ಷಕರಾದ ಜಿಎಂ ರಾಕೇಶ್ ರವರ ಕಾರ್ಮಿಕ ಇಲಾಖೆ ಬಗ್ಗೆ ಸಂಕ್ಷಿಪ್ತವಾಗಿ ಮಾಹಿತಿ ನೀಡಿದರು ನಂತರ ಕಾರ್ಮಿಕರಿಗೆ ಸುರಕ್ಷಿತ ಕಿಟ್ಟುಗಳನ್ನು ವಿತರಿಸಿದರು ಈ ಸಂದರ್ಭದಲ್ಲಿ ಕಾರ್ಯ ನಿರ್ವಹಣಾಧಿಕಾರಿಗಳಾದ ನಾಗಮಣಿ ಸಹಾಯಕ ಸರ್ಕಾರಿ ಅಭಿಯೋಜಕರಾದ ರಾಮ್ ಮೂರ್ತಿ ಆರಕ್ಷಕ ವೃತ್ತ ನಿರೀಕ್ಷಕ ರಾಧಾ ಮುನಿಕೃಷ್ಣ ಆರಕ್ಷಕ ಉಪನಿರೀಕ್ಷಕ ಮುತ್ತುರಾಜ್ ಶಂಕರ್ ಗೌಡ ವಕೀಲರಾದ ನಂದೀಶ್ವರ ರೆಡ್ಡಿ ಬದರಿನಾಥ್ ನರಸಿಂಹಪ್ಪ ನರೇಂದ್ರ ಶಿವಪ್ಪ ಎ ಎಫ್ ಆರ್ ಕೆ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷರಾದ ಹರೀಫ್ ಪಾಷಾ ಗೌರವಾಧ್ಯಕ್ಷರು ಉಪಾಧ್ಯಕ್ಷರು ಕಾರ್ಯದರ್ಶಿಗಳು ಸಂಘದ ಎಲ್ಲಾ ಸದಸ್ಯರು ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘಗಳು ಕಾರ್ಮಿಕರು ಹಾಗೂ ಸಾರ್ವಜನಿಕರು ಹಾಜರಿದ್ದರು.






