ಗುಡಿಬಂಡೆ ಜ 26 ರಂದು ಸ್ವಾಸಂತ್ರ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ದಿನಾಚರಣೆಗಳನ್ನು ಧಾರ್ಮಿಕ ಹಬ್ಬಗಳಂತೆಯೇ ವಿಜೃಂಭಣೆಯಿಂದ ಆಚರಿಸುವ ಮೂಲಕ ದೇಶಭಕ್ತಿ ಮೆರೆಯಬೇಕೆಂದು ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ತಿಳಿಸಿದರು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರೆವೇರಿಸಿ ಮಾತನಾಡಿದರು ನಾವು ಸಮಾಜದಲ್ಲಿ ಸೌಲಭ್ಯ ಹಾಗೂ ಹಕ್ಕುಗಳನ್ನು ಪಡೆದಿದ್ದೇವೆ ಎಂದರೆ ಅದಕ್ಕೆ ಸಂವಿಧಾನವೇ ಕಾರಣ ಧಾರ್ಮಿಕ ಹಬ್ಬಗಳನ್ನು ಅದ್ದೂರಿಯಾಗಿ ಆಚರಿಸುವ ನಾವು ಆ ಸಂಭ್ರಮದ ಹಿಂದೆ ಅನೇಕ ಮಹನೀಯರ ತ್ಯಾಗ ಮತ್ತು ಬಲಿದಾನಗಳಿವೆ ಎಂಬುವುದನ್ನು ಮರೆಯಬಾರದು ಜನರು ರಾಷ್ಟ್ರೀಯ ಹಬ್ಬಗಳಿಗೂ ತಮಗೂ ಸಂಬಂಧವಿಲ್ಲ ಎನ್ನುವಂತೆ ವರ್ತಿಸದೆ ಇನ್ನು ಮುಂದಾದರು ಇವುಗಳನ್ನು ಸಡಗರದಿಂದ ಆಚರಿಸಲು ಮುಂದಾಗಬೇಕೆಂದು ಶಾಸಕರು ವ್ಯಕ್ತಪಡಿಸಿದರು ಅಭಿವೃದ್ಧಿ ಕಾರ್ಯಗಳ ಕುರಿತು ಮಾತನಾಡಿ ಗುಡಿಬಂಡೆ ತಾಲೂಕಿಗೆ ಈಗಾಗಲೇ ಗರಿಷ್ಠ ಅನುದಾನ ತರಲಾಗಿದ್ದು ಬಹುತೇಕ ರಸ್ತೆ ಕಾಮಗಾರಿಗಳು ಪೂರ್ಣಗೊಂಡಿವೆ ಪಟ್ಟಣದ ರಾಮಪಟ್ಟಣ ರಸ್ತೆಗೆ 5 ಕೋಟಿ ಅನುದಾನ ನೀಡಲಾಗಿದ್ದು ರಸ್ತೆ ಬದಿಯ ಆಸ್ತಿ ಮಾಲೀಕರು ಸಹಕಾರ ನೀಡಿದ್ದಲ್ಲಿ ಹೆಚ್ಚುವರಿ 5 ಕೋಟಿ ತಂದು ಉತ್ತಮ ರಸ್ತೆ ನಿರ್ಮಾಣ ಮಾಡಲಾಗುವುದು ಅಲ್ಲದೆ 2 ಕೋಟಿ ರೂ ವೆಚ್ಚದಲ್ಲಿ ಅಂಬೇಡ್ಕರ್ ಭವನ ನಿರ್ಮಾಣವಾಗುತ್ತಿದ್ದು ಫೆಬ್ರವರಿ ಮೊದಲ ವಾರದಲ್ಲಿ ವಾಲ್ಮೀಕಿ ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಗುವುದು ಎಂದು ಮಾಹಿತಿ ನೀಡಿದರು ಈ ಕಾರ್ಯಕ್ರಮಕ್ಕೂ ಮುನ್ನ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಪಟ್ಟಣದ ಮುಖ್ಯ ರಸ್ತೆಯಲ್ಲಿ ಆಕರ್ಷಕ ಮೆರವಣಿಗೆ ನಡೆಸಿದರು ಪಿಎಂ ಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರದರ್ಶಿಸಿದ ಅಂಬೇಡ್ಕರ್ ಕುರಿತು ನೃತ್ಯ ರೂಪಕ ಸಾರ್ವಜನಿಕರ ಗಮನ ಸೆಳೆಯಿತು ತಿರುಮನಿ ಶಿಕ್ಷಕರಾದ ಲಕ್ಷ್ಮಿಪತಿಯವರು ಗಣರಾಜ್ಯೋತ್ಸವದ ಮಹತ್ವದ ಕುರಿತು ವಿಶೇಷ ಉಪನ್ಯಾಸ ನೀಡಿದರು ಕಾರ್ಯಕ್ರಮದಲ್ಲಿ ತಾಸಿಲ್ದಾರರು ತಾಲೂಕ ಪಂಚಾಯಿತಿ ಕಾರ್ಯನಿರ್ವಹಣೆ ಅಧಿಕಾರಗಳಾದ ನಾಗಮಣಿ ವೃತ್ತ ನಿರೀಕ್ಷಕರಾದ ಮುನಿಕೃಷ್ಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ರಫೀಕ್ ನೌಕರ ಸಂಘದ ಅಧ್ಯಕ್ಷ ಮುನಿಕೃಷ್ಣಪ್ಪ ಅಧ್ಯಕ್ಷ ವಿಕಾಸ್ ಇನ್ನು ಇತರೆ ಮುಖಂಡರು ಹಾಜರಿದ್ದರು.






