ಗುಡಿಬಂಡೆ ಏ18ರಂದು ಡಾ ಬಿಆರ್ ಅಂಬೇಡ್ಕರ್ ಅವರ 135ನೇ ಜಯಂತಿ ಮತ್ತು ಬಾಬು ಜಗಜೀವನ್ ರಾಮ್ ಅವರ 119 ನೇ ಜಯಂತಿಯನ್ನು ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ತಾಲೂಕು ಎಲ್ಲ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮದಲ್ಲಿ ಪ್ರತಿ ಪಂಚಾಯಿತಿಯಿಂದ ಬೆಳ್ಳಿರಥಗಳೊಂದಿಗೆ ಆಗಮಿಸಿ ಮಹಿಳೆಯರಿಂದ ಕಳಶಗಳೊಂದಿಗೆ ಹಾಗೂ ಕಲಾ ತಂಡಗಳ ಮೂಲಕ ಪಟ್ಟಣದ ಮುಖ್ಯ ರಸ್ತೆಯಲ್ಲಿ ಡಾ.ಬಿಆರ್ ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಭಾವಚಿತ್ರಗಳೊಂದಿಗೆ ಮೆರವಣಿಗೆ ನಡೆಸಿ ಡಾ.ಬಿಆರ್ ಅಂಬೇಡ್ಕರ್ ಪುತ್ತಳಿಗೆ ಹೂವಿನ ಹಾರ ಹಾಕಿ ಪುಷ್ಪಾರ್ಚನೆ ಸಲ್ಲಿಸಿದರು
ಈ ಸಂದರ್ಭದಲ್ಲಿ ಸಂವಿಧಾನ ಪೀಠಿಕೆಯ ಪ್ರತಿಜ್ಞೆಯನ್ನು ಕೈಗೊಂಡರು ಈ ಕಾರ್ಯಕ್ರಮದಲ್ಲಿ ಶಾಸಕರಾದ ಎಸ್ಎನ್ ಸುಬ್ಬಾರೆಡ್ಡಿ ಮಾತನಾಡಿ ಅಂಬೇಡ್ಕರ್ ಅವರಿಗೆ ಹೂವಿನ ಹಾರ ಹಾಕೋದು ಮಾತ್ರ ಗೌರವಲ್ಲ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಮಾತ್ರ ನಿಜವಾದ ಗೌರವ ಎಂದು ತಿಳಿಸಿದರು ಬಾಲ್ಯದಲ್ಲಿ ಅಂಬೇಡ್ಕರ್ ಅನುಭವಿಸಿದ ಕಷ್ಟಗಳನ್ನು ಸ್ಮರಿಸಿ ಶಿಕ್ಷಣ ಸಂಘಟನೆ ಮತ್ತು ಹೋರಾಟದ ಮೂಲಕ ಸಮಾಜದಲ್ಲಿ ಬದಲಾವಣೆ ತರಬೇಕೆಂದು ಕರೆ ನೀಡಿದರು
ಮುಖ್ಯ ಭಾಷಣಕಾರರಾದ ವಾಸು ಮಾತನಾಡಿ ಪ್ರಜಾಪ್ರಭುತ್ವದ ಮಹತ್ವವನ್ನು ವಿವರಿಸಿ ನಮ್ಮನ್ನು ಆಳುವವರು ರಾಜಮನೆತನದಿಂದ ಹುಟ್ಟಿರುವುದಿಲ್ಲ ಮತಪಟ್ಟಿಗೆಯಿಂದ ಆಯ್ಕೆಯಾಗಿರುತ್ತಾರೆ ಎಂದು ಪ್ರಜಾಪ್ರಭುತ್ವದ ಮತ ಚಲಾವಣೆ ಬಗ್ಗೆ ಅಂಬೇಡ್ಕರ್ ಆದರ್ಶದ ವಿವರಗಳನ್ನು ತಿಳಿಸಿ ಮತದಾನದ ಹಕ್ಕು ಎಲ್ಲರಿಗೂ ಸಿಗಲು ನಡೆದ ಹೋರಾಟಗಳ ಬಗ್ಗೆ ವಿವರಿಸಿದರು
ಈ ಕಾರ್ಯಕ್ರಮದಲ್ಲಿ ಕ್ರಾಂತಿ ಗೀತೆಗಳು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಾ ಜನರಲ್ಲಿ ಉತ್ಸಾಹ ತುಂಬಿದರು ಈ ಕಾರ್ಯಕ್ರಮದಲ್ಲಿ ಮಾಜಿ ಶಾಸಕರು ಹಾಲಿ ಉಗ್ರಾಣ ನಿಗಮದ ಅಧ್ಯಕ್ಷರಾದ ಎನ್ ಸಂಪಂಗಿ ತಾಲೂಕು ದಂಡಾಧಿಕಾರಿಗಳಾದ ಮಾನಿಷ ತಾಲುಕ್ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಾದ ನಾಗಮಣಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಲಕ್ಷ್ಮಿ ಪತಿ ರೆಡ್ಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೃಷ್ಣ ಕುಮಾರಿ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗಳಾದ ಆರತಿ ಇತರ ಇಲಾಖೆ ಅಧಿಕಾರಿಗಳು ದಲಿತ ಪರ ಸಂಘಟನೆಗಳು ಪದಾಧಿಕಾರಿಗಳು ಮುಖಂಡರು ಹಾಜರಿದ್ದರು.






