ಗುಡಿಬಂಡೆ 19 ರಂದು ಪ್ರತ್ಯೇಕ ವಿಧಾನಸಭಾ ಕ್ಷೇತ್ರವನ್ನಾಗಿ ಘೋಷಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಪ್ರತ್ಯೇಕ ವಿಧಾನಸಭಾ ಕ್ಷೇತ್ರ ಹೋರಾಟಗಾರರ ವೇದಿಕೆ ವತಿಯಿಂದ ತಾಸಿಲ್ದಾರ್ ಮುಖಾಂತರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು ಇದಕ್ಕೂ ಮುನ್ನ ಪಟ್ಟಣದ ಹೊರ ವಲಯದ ಅಂಬೇಡ್ಕರ್ ವೃತ್ತದಲ್ಲಿರುವ ಡಾಕ್ಟರ್ ಬಿಆರ್ ಅಂಬೇಡ್ಕರ್ ರವರ ಪುತ್ತಳಿಗೆ ಮಾಲಾರ್ಪಣೆ ಮಾಡಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ಬೃಹತ್ ಮೆರವಣಿಗೆ ನಡೆಸಿ ಹೋರಾಟಗಾರರಿಂದ ಪ್ರತ್ಯೇಕ ವಿಧಾನಸಭಾ ಕ್ಷೇತ್ರದ ಪರವಾಗಿ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು
ಇದೇ ಸಂದರ್ಭದಲ್ಲಿ ಮಾತನಾಡಿ ಹೋರಾಟಗಾರರ ವೇದಿಕೆಯ ಮುಖಂಡ ಅಮೀರ್ ಜಾನ್ ನಮ್ಮ ಅಸ್ತಿತ್ವದ ಉಳಿವಿಗಾಗಿ ನಾವೆಲ್ಲರೂ ಹೋರಾಟಕ್ಕೆ ಇಳಿಯಬೇಕಾದ ಅನಿವಾರ್ಯತೆ ಎದುರಾಗಿದೆ ಎಂದರು ಕಳೆದ ತಿಂಗಳು ನಡೆದ ಪೂರ್ವಭಾವಿ ಸಭೆಯ ತೀರ್ಮಾನದಂತೆ ಇಂದು ಕರವೇ ವತಿಯಿಂದ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಿದ್ದೇವೆ ಎಂದು ತಿಳಿಸಿ ಪ್ರಸ್ತುತ ಜನಗಣತಿ ಕಾರ್ಯ ನಡೆಯುತ್ತಿದ್ದು ಇದು ಮುಗಿದ ತಕ್ಷಣ ಕ್ಷೇತ್ರ ಪುನರ್ ವಿಂಗಡನೆ ಪ್ರಕ್ರಿಯೆ ಆರಂಭವಾಗಲಿದೆ ಆ ಸಮಯದಲ್ಲಿ ಗುಡಿಬಂಡೆಯನ್ನು ಕಡ್ಡಾಯವಾಗಿ ಪ್ರತ್ಯೇಕ ವಿಧಾನಸಭಾ ಕ್ಷೇತ್ರ ಮಾಡಬೇಕು ಮತ್ತು ಅಲ್ಲಿವರೆಗೂ ನಮ್ಮ ಹೋರಾಟ ನಿರಂತರವಾಗಿ ಹೋರಾಟ ಮುಂದುವರಿಸುವುದಾಗಿ ಸ್ಪಷ್ಟಪಡಿಸಿದರು
ಕಸಾಪ ನಿಕಟ ಪೂರ್ವ ಅಧ್ಯಕ್ಷ ರಾದ ಸುಬ್ಬರಾಯಪ್ಪ ಮಾತನಾಡಿ ಪ್ರಸ್ತುತ ಗುಡಿಬಂಡೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿದ್ದು ಈ ಕ್ಷೇತ್ರಕ್ಕೆ ಮೂರು ತಾಲೂಕುಗಳು ಬರುವುದರಿಂದ ಈ ಗುಡಿಬಂಡೆ ತಾಲೂಕು ಭಾಗಕ್ಕೆ ಸರಿಯಾಗಿ ಅನುದಾನ ಸಿಗುತ್ತಿಲ್ಲ ಹಾಗೂ ಗುಡಿಬಂಡೆ ಪ್ರತ್ಯೇಕ ಕ್ಷೇತ್ರವಾದರೆ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಅಭಿಪ್ರಾಯಪಟ್ಟರು ಈ ಹಿನ್ನಲೆಯಲ್ಲಿ ಗುಡಿಬಂಡೆ ನಗರಗೆರೆ ಹಾಗೂ ಮಂಡಿಕಲ್ ಹೋಬಳಿಗಳ ಸಾರ್ವಜನಿಕರು ಈ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಬೇಕೆಂದು ಕರೆ ನೀಡಿದರು ಈ ಸಂದರ್ಭದಲ್ಲಿ ಗಂಗರಾಜು ಕರವೇ ಅಧ್ಯಕ್ಷ ಶ್ರೀನಿವಾಸ್ ಯಾದವ್ ಅಪ್ಸರ್ ಮಾತನಾಡಿ ಈ ಹೋರಾಟಕ್ಕಾಗಿ ರಕ್ತ ಪ್ರಾಣ ಅಥವಾ ಆಸ್ತಿ ಕಳೆದುಕೊಳ್ಳಬೇಕಾಗಿ ಬಂದರು ನಾವು ಸಿದ್ಧರಿದ್ದು ಪ್ರತ್ಯೇಕ ಕ್ಷೇತ್ರ ಸಿಗುವವರೆಗೂ ಇಂದೇ ಸರಿಯುವ ಪ್ರಶ್ನೆಯೇ ಇಲ್ಲ ಮತ್ತು ಮುಂದಿನ ದಿನಗಳಲ್ಲಿ ಮತ್ತಷ್ಟು ಉಗ್ರ ಹೋರಾಟ ರೂಪಿಸಲಾಗುವುದೆಂದು ಎಚ್ಚರಿಸಿದರು ಈ ಪ್ರತಿಭಟನೆಯನ್ನು ಗುಡಿಬಂಡೆ ಪ್ರತ್ಯೇಕ ವಿಧಾನಸಭಾ ಕ್ಷೇತ್ರ ಹೋರಾಟಗಾರರು ಕರವೇ ಪದಾಧಿಕಾರಿಗಳು ಸಂಘ ಸಂಸ್ಥೆಗಳ ಮುಖಂಡರು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಜರಿದ್ದರು






